ದೇವರಾಜು ಅರಸು ಇಂದಿನ ಸಮಾಜಕ್ಕೆ ಸ್ಪೂರ್ತಿ ; ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗೆ ಶ್ರಮಿಸಬೇಕು. ಶಾಸಕ – ಡಾ.‌ ಶ್ರೀನಿವಾಸ್. ಎನ್.‌ ಟಿ…!!!

Listen to this article

ದೇವರಾಜು ಅರಸು ಇಂದಿನ ಸಮಾಜಕ್ಕೆ ಸ್ಪೂರ್ತಿ ; ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗೆ ಶ್ರಮಿಸಬೇಕು. ಶಾಸಕ – ಡಾ.‌ ಶ್ರೀನಿವಾಸ್. ಎನ್.‌ ಟಿ.

ಕೂಡ್ಲಿಗಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ದಿ; 20-08-24 ರಂದು “ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ” ವತಿಯಿಂದ ಹಮ್ಮಿಕೊಂಡಿರುವ ಮಾಜಿ ಮುಖ್ಯಮಂತ್ರಿಗಳಾದ ದಿ. ದೇವರಾಜು ಅರಸು ಅವರ 109 ನೇ ಜಯಂತಿ ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ, ಶೋಷಿತ ಮತ್ತು ಅಲ್ಪಸಂಖ್ಯಾತರ ಸಮಾಜಿಕ ಸುಧಾರಣೆಗೆ ಒತ್ತು ಕೊಟ್ಟು ದುಡಿದ ದೇವರಾಜು ಅರಸು ಅವರ ತತ್ವ – ಸಿದ್ಧಾಂತಗಳ ತಿಳುವಳಿಕೆಗಳು ಇಂದಿನ ಯುವ ಸಮಾಜಕ್ಕೆ ಅಗತ್ಯ. ಬಡತನದ ಸ್ಥಿತಿಯಲ್ಲಿ ಇರುವ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಊಟ ಮತ್ತು ವಸತಿಗೆ ಒತ್ತು ಕೊಟ್ಟು ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳು ಸಮಸ್ಯೆಗಳಿಗೆ ತಲೆಕೆಡಿಸಿಕೊಳ್ಳದೇ ದೇವರಾಜ ಅರಸು ಅವರನ್ನು ಪ್ರೇರಣೆ – ಸ್ಪೂರ್ತಿಯಾಗಿ ತೆಗೆದುಕೊಂಡು ಸಾಧನೆ ಹಾದಿಯಲ್ಲಿ ನಡೆಯಬೇಕು ಎಂದರು. ಈ ವೇಳೆ ತಹಶೀಲ್ದಾರ್ ಎಂ ರೇಣುಕಾ ಹಾಗೂ ಹಿಂದುಳಿದ ವರ್ಗಗದ ಅಧಿಕಾರಿ ಇಬ್ರಾಹಿಮ್ , ಪಂ.ಪ. ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ, ಸ್ಥಾಯಿಸಮಿತಿಯ ಸದಸ್ಯರಾದ ಶೂಕರ್ ಭಾಯ್, ನಿಲಯ ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend