ಅಂತರ್ಜಾತಿ ದಲಿತ ಯುವತಿ ಮೇಲೆ ಹತ್ಯ….
ಗಂಗಾವತಿ. ಆಗೋಲಿ ಗ್ರಾಮದ ಯುವತಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು ಯುವಕನ ಮನೆಯವರು ಹಲ್ಲೆ ಮಾಡಿ ಬಳಿಕ ವಿಷ ಹಾಕಿ ಕೊಲೆ ಮಾಡಿದ್ದಾರೆ ಎಂದು ಯುವತಿಯ ತಂದೆ ಪೊಲೀಸರಿಗೆ ದೂರ ನೀಡಿದರೆ.
ಮೃತ ಯುವತಿಯು ಮಾದಿಗ ಸಮುದಾಯಕ್ಕೆ ಸೇರಿದ ಮರಿಯಮ್ಮ (21) ವಯಸ್ಸಿನವಳು ಎಂದು ತಿಳಿದು ಬಂದಿದೆ.
ಗಂಗಾವತಿಯ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮರಿಯಮ್ಮ ಹಾಗೂ ಹನುಮಯ್ಯ ಇಬ್ಬರ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಹನುಮಯ್ಯ (ST) ಸಮುದಾಯಕ್ಕೆ ಸೇರಿದ ಯುವಕ. ಮರಿಯಮ್ಮ ದಲಿತ ಸಮುದಾಯಕ್ಕೆ ಸೇರಿದ ಮಹಿಳೆ.
2023 ರ ಏಪ್ರಿಲ್ ನಲ್ಲಿ ತಮ್ಮ ಕುಟುಂಬದವರನ್ನು ಒಪ್ಪಿಸಿ ಬಳಿಕ ಗಂಗಾವತಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ನಂತರ ಯುವಕನ ಮನೆಯಲ್ಲಿ ಜಾತಿ ಸಂಬಂಧ ಇವತ್ತಿಗೆ ಹಿಂಸೆ ನೀಡಲಾಗಿತ್ತು ಎನ್ನಲಾಗಿದೆ . ಅಲ್ಲದೆ ವರದಕ್ಷಿಣೆ ತರುವಂತೆ ಕೂಡ ಪೀಡಿಸುತ್ತಿದ್ದರು ಎಂಬ ಆರೋಪ ಕೂಡ ಕೇಳಿ ಬಂದಿವೆ.
ಯುವಕನ ಕುಟುಂಬದವರು ಯುವತಿಗೆ ಹಲ್ಲೆ ನಡೆಸಿದ್ದು ಈ ವೇಳೆ ಯುವತಿಯ ಸಾವು ಆಗಿದೆ . ನಂತರ ಯಾವುದೇ ಅನುಮಾನ ಬರಬಾರದೆಂದು ವಿಷಹುಣಿಸಿದ್ದಾರೆ ಎಂದು ಯುವತಿಯ ತಂದೆ ಗಾಳಪ್ಪ ಆರೋಪಿಸಿದ್ದಾರೆ.
ನಂತರ ಕುಟುಂಬದವರು ಯುವತಿಯ ಕುಟುಂಬಕ್ಕೆ ಕರೆ ಮಾಡಿ ನಿಮ್ಮ ಮಗಳು ಜಮೀನಿನಲ್ಲಿ ವಿಷ ಕುಡಿದಿದ್ದಾಳೆ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದೆವೆ ಎಂದು ತಿಳಿಸಿರುವಾದಾಗಿ ಯುವತಿಯ ತಂದೆ ಗಂಗಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವಿಠಲಾಪುರ ಗ್ರಾಮಕ್ಕೆ ಗಂಗಾವತಿ ಪೊಲೀಸರು ಭೇಟಿ ನೀಡಿದ್ದು ಯುವತಿಯ ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಮೃತದೆಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಅಲ್ಲದೆ ಈ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಯುವಕನ ಕುಟುಂಬದ ಹದಿಮೂರು ಮಂದಿಯ ಮೇಲೆ ಯುವತಿಯ ತಂದೆ ಕೊಲೆ ಆರೋಪಿಸಿದ್ದರಿಂದ ಇಬ್ಬರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ…
ವರದಿ. ಮಂಜುನಾಥ್ ಉಪ್ಪಾರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030