ತರಬೇತಿ ವಿದ್ಯಾರ್ಥಿಗಳ ಸೃಜನಶೀಲತೆಗೆ ಒತ್ತು ನೀಡಿ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ.
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್ . ಎನ್. ಟಿ. ಅವರು ದಿ. 03-07-24 ರಂದು ಪಟ್ಟಣದ ರಾಷ್ಟ್ರೀಯ ಹೆದ್ದಾರಿ- 50 ರಲ್ಲಿ ಬರುವ ಶ್ರೀ ಗುಳಗಿ ನಾಗರಾಜ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಅಭಿವೃದ್ಧಿಗೆ ಒತ್ತು ಕೊಡುವೆ ಎಂದರು. ಶಾಸಕರು, ವಿದ್ಯಾರ್ಥಿಗಳ ಸೃಜನಶೀಲತೆ ವಸ್ತುಗಳನ್ನು ವೀಕ್ಷಣೆ ಮಾಡಿ ಹೆಚ್ಚಿನದಾಗಿ ವಿಶೇಷ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸಲು ತಿಳಿಸಿದರು. ತರಬೇತಿ ಅಧಿಕಾರಿಗಳಿಗೆ ಮತ್ತು ಉಪನ್ಯಾಸಕರಿಗೆ ಪರಿಸರ ಕಡೆ ಗಮನಹರಿಸುವಂತೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿ ಅಶೋಕ ರಾಯಾಗಡ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030